Parihara: ಮಳೆಯ ಕೊರತೆಗೆ ಸರ್ಕಾರದ 50,000/- ಪರಿಹಾರ ಪ್ಯಾಕೇಜ್ ಘೋಷಣೆ! ಇಂದೇ ಅರ್ಜಿ ಹಾಕಿ

Parihara: ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪರಿಹಾರ ಪ್ಯಾಕೇಜ್ ಘೋಷಣೆ! ಹೌದು ಪ್ರಸ್ತುತ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯ ಕೊರತೆಯಿಂದಾಗಿ ಲಕ್ಷಾಂತರ ರೈತರು ಬೆಳೆದ ಬೆಳೆಗಳು ಒಣಗಿಹೋಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರ ಈ ಸಂಕಷ್ಟವನ್ನು ದೂರ ಮಾಡುವ ನಿಟ್ಟಿನಲ್ಲಿ ಮುಂಖ್ಯಮಂತ್ರಿ DK ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರವು ರೈತರಿಗೆ ನೆರವಾಗಲು ಮುಂದಾಗಿದ್ದು, ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದರೆ ಪ್ರತಿ ಎಕರೆಗೆ 50,000/- ಹಣವನ್ನು ಪರಿಹಾರವಾಗಿ ನೀಡಲು ನಿರ್ಧರಿಸಿದೆ.


ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಹಾಗೂ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ, ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಈ ಬೆಳೆ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದ್ದು, ರೈತರು ತಮ್ಮ ಬ್ಯಾಂಕ್ ಪಾಸ್ ಬುಕ್ ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಸೂಚಿಸಿದೆ.

ಹಾಗಿದ್ದರೆ, ಈ ಸರ್ಕಾರದ ಪರಿಹಾರ ಪ್ಯಾಕೆಜ್ ಅನ್ನು ಪಡೆಯಲು ಯಾರು ಅರ್ಹರು? ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುದು? ಹೀಗೆ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

Parihara

ಪ್ರಮುಖ ಹೈಲೈಟ್ ಪಾಯಿಂಟ್ಸ್:

* ಬರಗಾಲದಿಂದ ಕಂಗಾಲಾಗಿರುವ ಲಕ್ಷಾಂತರ ರೈತರಿಗೆ ಭಾರೀ ಪರಿಹಾರ ಪ್ಯಾಕೆಜ್ ಘೋಷಣೆ.
* ಮಳೆಯ ಕೊರತೆಯಿಂದ ಹಾನಿಯಾಗಿರುವ ಪ್ರತಿ ಎಕರೆಯ ಬೆಳೆಗಳಿಗೆ 50,000/- ಪರಿಹಾರ ಹಣ ಘೋಷಣೆ
* ಬೆಳೆ ನಾಶದಿಂದ ಸಾಲದ ಸುಳಿಗೆ ಸಿಲುಕಿ ಕಣ್ಣೀರು ಹಾಕುತ್ತಿರುವ ರೈತರಿಗೆ ರಾಜ್ಯ ಸರ್ಕಾರದಿಂದ ದೊಡ್ಡ ಭರವಸೆ

ಸರ್ಕಾರದ ಈ ಮಹತ್ವದ ನಿರ್ಧಾರದ ಬಗ್ಗೆ:

ಪ್ರಸ್ತುತ ಸಾಲಿನಲ್ಲಿ ಮುಂಗಾಲು ಹಿಂಗಾಲು ಮಳೆಗಳ ಕೊರತೆಯಿಂದಾಗಿ ರೈತರು ಬೆಳೆದ ಬೆಳೆಗಳೆಲ್ಲವೂ ಒಣಗಿ ನಾಶವಾಗಿದ್ದು, ಇದರಿಂದ ಕೆಲವು ರೈತರು ಸಾಲದ ಸುಳಿಗೆ ಸಿಲುಕಿ ಸಾಲವನ್ನು ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ಬಂದು ತಲುಪಿದ್ದಾರೆ. ಇನ್ನು ಕೆಲವು ರೈತರು ಕೃಷಿ ಚಟುವಟಿಕೆಯ ಮೇಲೆ ಭರವಸೆಯನ್ನು ಕಳೆದುಕೊಂಡು ಇದರಿಂದ ದೂರ ಸರಿಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ತಮ್ಮ ಜಮೀನಿನಲ್ಲಿ ಬೆಳೆ ಹಾನಿಯಾಗಿರುವ ಪ್ರತಿ ರೈತರಿಗೆ ಪ್ರತಿ ಎಕರೆಗೆ ಅನುಗುಣವಾಗಿ 50,000/- ಪರಿಹಾರ ಹಣವನ್ನು ನೀಡಲು ಮುಂದಾಗಿದೆ. ಫ್ರೂಟ್ಸ್ ಐಡಿ ಹೊಂದಿರುವ ರೈತರು ಈ ಯೋಜನೆಯಡಿಯಲ್ಲಿ ತಾವು ಅನುಭವಿಸಿದ ನಷ್ಟಕ್ಕೆ ಪರಿಹಾರವನ್ನು ಪಡೆದುಕೊಳ್ಳಬಹುದಾಗಿದೆ.

ಪರಿಹಾರ ಹಣವನ್ನು ನೀಡುವುದರ ಹಿಂದಿನ ಉದ್ದೇಶ:

  • ರೈತರ ಜೀವನ ಮಟ್ಟವನ್ನು ಸುಧಾರಿಸುವುದು:

ರೈತರು ಬೆಳೆದ ಬೆಳೆಗಳು ಮಳೆಯ ಕೊರತೆಯಿಂದ ನಾಶವಾಗಿದ್ದು, ಇದರಿಂದ ರೈತರ ಆದಾಯ ಮಟ್ಟವು ಕುಸಿದು ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ತಡೆದು ಅವರ ಜಮೀನಿನಲ್ಲಿ ಹಾನಿಯಾದ ಬೆಳೆಗಳಿಗೆ ಎಕರೆಗೆ ಅನುಗುಣವಾಗಿ ಪರಿಹಾರ ಹಣವನ್ನು ನೀಡುವ ಮೂಲಕ ಅವರ ಆರ್ಥಿಕ ಮಟ್ಟ ಕುಸಿಯದಂತೆ ತಡೆಗಟ್ಟುವುದು.

  • ಬೆಳೆ ನಷ್ಟಕ್ಕೆ ಆರ್ಥಿಕ ನೆರವು ನೀಡುವುದು:

ಮುಂಗಾರು ಹಾಗೂ ಹಿಂಗಾರು ಮಳೆಗಾಲ ಕೊರತೆಯಿಂದಾಗಿ ಬೆಳೆಗಳೆಲ್ಲವೂ ಸಷ್ಟವಾಗಿರುವ ರೈತರಿಗೆ ಸರ್ಕಾರದ ವತಿಯಿಂದ ಐವತ್ತು ಸಾವಿರ ಪರಿಹಾರ ಹಣವನ್ನು ನೀಡುವುದು ಈ ಯೋಜನೆಯ ಉದ್ದೇಶ.

  • ಮುಂದಿನ ಕೃಷಿ ಚಟುವಟಿಕೆಗೆ ಉತ್ತೇಜನ ನೀಡುವುದು:

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗಳು ಮಳೆಯ ಕೊರತೆಯಿಂದ ಹಾನಿಯಾಗಿದ್ದಕ್ಕೆ ಅನೇಕ ರೈತರು ಕಂಗಾಲಾಗಿ ಮುಂದಿನ ಕೃಷಿ ಚಟುವಟಿಕೆಯಲ್ಲಿ ಮುಂದುವರೆಸಲು ಹಣವನ್ನು ಹೊಂದಿಸುವುದು ಹೇಗೆ ಎಂದು ಚಿಂತೆ ಮಾಡುತ್ತಿದ್ದು, ಇಂತಹ ರೈತರಿಗೆ ಆರ್ಥಿಕ ನೆರವನ್ನು ನೀಡುವ ಮೂಲಕ ಬಿತ್ತನೆ ಬೀಜಗಳನ್ನು, ರಸಗೊಬ್ಬರಗಳನ್ನು ಹಾಗೂ ಇನ್ನಿತರ ಕೃಷಿ ಚಟುವಟಿಕೆಗೆ ಅಗತ್ಯವಾದ ಉಪಕರಣಗಳನ್ನು ಖರೀದಿಸಲು ನೆರವಾಗುವುದು.

  • ಕೃಷಿ ಕ್ಷೇತ್ರದಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು:

ಸರ್ಕಾರವು ಆರ್ಥಿಕ ನೆರವನ್ನು ನೀಡುವ ಮೂಲಕ ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರು ಮುಂದಿನ ದಿನಗಳಲ್ಲಿ ಕೃಷಿಯನ್ನು ಕೈಬಿಡದೆ ಮುಂದುವರೆಸುವಂತೆ ಪ್ರರೇಪಿಸುವುದು ಹಾಗೂ ಗ್ರಾಮೀಣ ಆರ್ಥಿಕತೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳುವಂತೆ ಮಾಡುವುದು.

ಪರಿಹಾರ ಹಣದ ವಿವರ:

ರೈತರು ಖುಷ್ಕಿ ಜಮೀನನ್ನು ಹೊಂದಿದ್ದರೂ, ನೀರಾವರಿ ಜಮೀನನ್ನು ಹೊಂದಿದ್ದರೂ ಕೂಡ ಈ ಜಮೀನಿನಲ್ಲಿ ಪ್ರಸ್ತುತ ಸ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆಯ ಕೊರತೆಯಿಂದಾಗಿ ಬೆಳೆಗಳು ನಷ್ಟವಾಗಿದ್ದರೆ, ಬೆಳೆ ನಷ್ಟವಾಗಿರುವ ಪ್ರತಿ ಎಕ್ಕರೆಗಳಿಗೆ ರೂ. 50,000/- ಪರಿಹಾರ ಹಣವನ್ನು ಸರ್ಕಾರದಿಂದ ಪಡೆಯಬಹುದಾಗಿದೆ. ಅಂದರೆ ಪ್ರತಿ ಹೆಕ್ಟೇರ್ ಗೆ ರೂ. 1,23,500/- ವರೆಗೆ ಪರಿಹಾರ ಹಣವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಹತಾ ಮಾನದಂಡಗಳೇನು?

  • ರೈತರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಮಳೆಯ ಕೊರತೆಯಿಂದ ರೈತರು ಬಿತ್ತನೆ ಮಾಡಿದ ಬೆಳೆಗಳಲ್ಲಿ ಕನಿಷ್ಠ 33% ಅದಕ್ಕಿಂತ ಹೆಚ್ಚು ನಾಶವಾಗಿರಬೇಕು.
  • ರೈತರು ಎಷ್ಟು ಎಕರೆ ಜಮೀನನ್ನು ಹೊಂದ್ದರು ಕೂಡ, ಸರ್ಕಾರದಿಂದ 2 ಹೆಕ್ಟೇರ್ ಜಮೀನಿನ ವರೆಗೆ ಮಾತ್ರ ಪರಿಹಾರ ಹಣ ಸಿಗುತ್ತದೆ.
  • ರೈತರು ಕಡ್ಡಾಯವಾಗಿ ಕರ್ನಾಟಕ ಸರ್ಕಾರದ FRUITS ಪೋರ್ಟಲ್ ಅಡಿಯಲ್ಲಿ ನೋಂದಣಿ ಆಗಿರಬೇಕು.
  • ರೈತರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಜೋಡಣೆಯಾಗಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
  • ಭೂ ದಾಖಲೆಗಳು
  • FRUITS ಐಡಿ
  • ಹಾನಿಗೊಳಗಾದ ಬೆಳೆಗಳ ಫೋಟೋ
  • ವಾಸಸ್ಥಳ ದೃಢೀಕರಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ:

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳು ಮಳೆಯ ಕೊರತೆಯಿಂದ ನಾಶವಾಗಿದ್ದರೆ, ರೈತರು ಸರ್ಕಾರದಿಂದ ಪರಿಹಾರ ಹಣವನ್ನು ಪಡೆಯಲು ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ. ಹೇಗೆ ಎಂಬುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
  • ಅರ್ಹ ಫಲಾನುಭವಿಗಳು ಸಂಬಂಧಿತ ಇಲಾಖೆಯ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಫಾರ್ಮರ್ ಕಾರ್ನರ್ ಅನ್ನು ಕ್ಲಿಕ್ ಮಾಡಿ.
  • ಹೊಸ ಬಳಕೆದಾರಗಿದರೆ, ಮೊಬೈಲ್ ನಂಬರ್ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ವೈಯಕ್ತಿಕ ವಿವರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಭೂ ದಾಖಲೆಯ ಸರ್ವೇ ನಂಬರ್ ಹಾಗೂ ಮಳೆ ಕೊರತೆಯಿಂದ ಹಾನಿಗೊಳಗಾಗದ ಬೆಳೆಗಳ ವಿವರಗಳನ್ನು ಹಾಗೂ ಫೋಟೋಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
  • ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಗೆ ಭೇಟಿ ನೀಡಿ.
  • ಬೆಳೆ ಪರಿಹಾರಕ್ಕೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದು ಅದರಲ್ಲಿ ಕೇಳಲಾಗಿರುವ ಎಲ್ಲ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಈ ಮೇಲೆ ತಿಳಿಸಲಾದ ಎಲ್ಲ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ ಅರ್ಜಿ ಸಲ್ಲಿಸಿ.

ಅಂತಿಮ ತೀರ್ಮಾನ:

ರಾಜ್ಯ ಸರ್ಕಾರವು ಮಳೆ ಕೊರತೆ, ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಹಾನಿ ಹಾಗೂ ಇನ್ನಿತರ ಪ್ರಕೃತಿ ವಿಕೋಪಗಳಿಂದ ಬೆಳೆದ ಬೆಳೆಗಳಲ್ಲಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಹಣವನ್ನು ಒದಗಿಸುತ್ತದೆಯಾದರು, ಹಾನಿಯಾದ ಬೆಳೆಗಳಿಗೆ ಪ್ರತಿ ಎಕರೆಗೆ ರೂ. 50,000/- ಪರಿಹಾರ ಹಣವನ್ನು ಘೋಷಣೆಮಾಡುವುದಾಗಿ ತಿಳಿಸಿರುವ ಮಾಹಿತಿಯು ಸತ್ಯಕ್ಕೆ ದೂರವಾಗಿದ್ದು, ರೈತರು ಈ ಮಾಹಿತಿಯನ್ನು ನಂಬುವುದು ಸೂಕ್ತವಲ್ಲ. ರೈತರು ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅರ್ಜಿ ಸಲ್ಲಿಸುವುದು ಉತ್ತಮ.


ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Instagram LinkClick Here

ಇತರೆ ಪ್ರಮುಖ ಲಿಂಕುಗಳು:

Leave a Comment