Vikas Bank: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ! ಏಪ್ರಿಲ್ 24 ಕೊನೆಯ ದಿನಾಂಕ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಹೊಸಕೋಟೆಯ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Vikas Bank Recruitment in Kannada

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಶಾಖಾ ವ್ಯವಸ್ಥಾಪಕರು, ಆಡಿಟರ್, ಜೂನಿಯರ್ ಅಸಿಸ್ಟೆಂಟ್, ಪ್ರೊಬೇಷನರಿ ಅಧಿಕಾರಿ, ಕಾನೂನು ಅಧಿಕಾರಿ ಸೇರಿದಂತೆ ಒಟ್ಟು 46 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಒಂದು ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

Vikas Bank

ಹುದ್ದೆಯ ಸಂಕ್ಷಿಪ್ತ ನೋಟ:

ನೇಮಕಾತಿ ಸಂಸ್ಥೆ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಹೊಸಕೋಟೆ
ಹುದ್ದೆಯ ಹೆಸರು ಶಾಖಾ ವ್ಯವಸ್ಥಾಪಕರು, ಆಡಿಟರ್, ಕಾನೂನು ಅಧಿಕಾರಿ, ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು
ಹುದ್ದೆಯ ಸಂಖ್ಯೆ ಒಟ್ಟು 46 ಹುದ್ದೆಗಳು
ಉದ್ಯೋಗ ಸ್ಥಳ ಹೊಸಕೋಟೆ ಮತ್ತು ಬ್ಯಾಂಕಿನ ವಿವಿಧ ಶಾಖೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಸಂಕ್ಷಿಪ್ತ ವಿವರ:

ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿವಿಧ ಹುದ್ದೆಗಳನ್ನು ಈ ಕೆಳಕಂಡಂತೆ ವಿಂಗಡಿಸಲಾಗಿದೆ.

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರೊಬೇಷನರಿ ಅಧಿಕಾರಿ 20 ಹುದ್ದೆಗಳು
ಶಾಖಾ ವ್ಯವಸ್ಥಾಪಕ ಅಥವಾ ಹಿರಿಯ ಅಧಿಕಾರಿ 10 ಹುದ್ದೆಗಳು
ರಿಕವರಿ ಅಸಿಸ್ಟೆಂಟ್ ಅಥವಾ ಜೂನಿಯರ್ ಅಸಿಸ್ಟೆಂಟ್ 10 ಹುದ್ದೆಗಳು
ಆಡಿಟರ್ 4 ಹುದ್ದೆಗಳು
ಕಾನೂನು ಅಧಿಕಾರಿ 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಪ್ರೊಬೇಷನರಿ ಅಧಿಕಾರಿ:

ಬ್ಯಾಂಕಿಂಗ್, ಅಕೌಂಟಿಂಗ್ ಅಥವಾ ವಾಣಿಜ್ಯ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದುದು. ಅನುಭವ ಹೊಂದಿರದ ಫ್ರೆಶರ್ ಅಭ್ಯರ್ಥಿಗಳಿಗೂ ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ

  • ಶಾಖಾ ವ್ಯವಸ್ಥಾಪಕ:

ಮಾನ್ಯತೆ ಪಡದೆ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮೃದು ಕೌಶಲ್ಯ ಹಾಗೂ ತಂತ್ರಜ್ಞಾನದಲ್ಲಿ ಜ್ಞಾನ ಹೊಂದಿರಬೇಕು. ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯಲ್ಲಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಬ್ಯಾಂಕಿಂಗ್ ಮತ್ತು ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

  • ರಿಕವರಿ ಅಸಿಸ್ಟೆಂಟ್:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು. ಸಾಲದ ವಸೂಲಾತಿ ಅಥವಾ ಹಣಕಾಸು ಸಂಸ್ಥೆಯಲ್ಲಿ ಕೆಲಸದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

  • ಆಡಿಟರ್:

ಅಕೌಂಟಿಂಗ್ ಅಥವಾ ವಾಣಿಜ್ಯ ವಿಷಯದಲ್ಲಿ ಪದವಿ ಹೊಂದಿರಬೇಕು. ಜೊತೆಗೆ ಚಾರ್ಟರ್ಡ್ ಅಕೌಂಟೆಂಟ್ಸ್ ಅಥವಾ ಸಿ.ಎ.ಎಂ.ಎಸ್ ಅರ್ಹತೆಯನ್ನು ಹೊಂದಿರಬೇಕು. ಟ್ಯಾಕ್ಸ್ ಕನ್ಸಲ್ಟೆನ್ಸಿ ಅಥವಾ ಬ್ಯಾಂಕ್ ಆಡಿಟ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

  • ಕಾನೂನು ಅಧಿಕಾರಿ:

ಕಾನೂನು ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಬ್ಯಾಂಕ್ ರಿಕವರಿ ಪ್ರಕರಣಗಳು ಹಾಗೂ ಸಿವಿಲ್ ಕೇಸ್ ಗಳನ್ನು ನಿರ್ವಹಿಸಿದ ಕನಿಷ್ಠ 5 ವರ್ಷಗಳ ಅನುಭವ ಇರಬೇಕು.

ವಯೋಮಿತಿ ವಿವರ:

ಏಪ್ರಿಲ್ 1, 2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯೋಮಿತಿಯನ್ನು ಅಳಿಯಲಾಗುತ್ತದೆ.

  • ಪ್ರೊಬೇಷನರಿ ಅಧಿಕಾರಿ ಅಥವಾ ರಿಕವರಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಶಾಖಾ ವ್ಯವಸ್ಥಾಪಕರು, ಆಡಿಟರ್ ಹಾಗೂ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಬ್ಯಾಂಕಿಂಗ್ ನ ಕೆಲವು ನಿಯಮಗಳ ಪ್ರಕಾರ, ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಶುಲ್ಕ:

ವಿಕಾಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಯುಪಿಐ ಕ್ಯೂ ಆರ್ ಕೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

  • ಅರ್ಜಿ ಶುಲ್ಕಗಳ ಒಟ್ಟು ಮೊತ್ತ: ರೂ. 500/-
ಇದನ್ನು ಗಮನಿಸಿ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಕಡ್ಡಾಯವಾಗಿ ಯುಪಿಐ ರೆಫರೆನ್ಸ್ ನಂಬರ್ ಅನ್ನು ಆನ್ಲೈನ್ ಅರ್ಜಿಯಲ್ಲಿ ತಪ್ಪದೆ ನಮೂದಿಸಬೇಕು.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿನ ವೇತನ ಶ್ರೇಣಿ ಮತ್ತು ನಿಯಮಗಳ ಪ್ರಕಾರ, ಆಕರ್ಷಕ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳ ಕೌಶಲ್ಯ ಹಾಗೂ ಹುದ್ದೆಗಳ ಜವಾಬ್ದಾರಿಯ ಆಧಾರದ ಮೇಲೆ ಮಾಸಿಕ ಸಂಭಾವನೆಯನ್ನು ನಿಗದಿಪಡಿಸಲಾಗುವುದು.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಅನುಭವ ಪ್ರಮಾಣಪತ್ರ
  • ಶೈಕ್ಷಣಿಕ ಪ್ರಮಾಣಪತ್ರ
  • UPI ಪಾವತಿ ರಶೀದಿ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಗೂಗಲ್ ಫಾರ್ಮ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ವೆಬ್ಸೈಟ್ ನಲ್ಲಿ ಲಭ್ಯವಿರುವ ಗೂಗಲ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಅನುಭವ ವಿವರವನ್ನು ಭರ್ತಿಮಾಡಿ.
  • ಅಲ್ಲಿ ನೀಡಲಾದ ಕ್ಯೂಆರ್ ಕೋಡ್ ಬಳಸಿ ರೂ. 500/- ಶುಲ್ಕವನ್ನು ಪಾವತಿಸಿ ರೆಫರೆನ್ಸ್ ಸಂಖ್ಯೆಯನ್ನು ನಮೂದಿಸಿ.
  • ನಂತರ ಅರ್ಜಿಯನ್ನು ಸಲ್ಲಿಸಿ, ನಿಮ್ಮ ಇಮೇಲ್ ಐಡಿಗೆ ಬರುವ ದೃಢೀಕರಣ ಸಂದೇಶವನ್ನು ಉಳಿಸಿಕೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ಆನ್ಲೈನ್ ಪರೀಕ್ಷೆ:

ಆನ್ಲೈನ್ ಪರೀಕ್ಷೆಯು 150 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಗಳು ತಮ್ಮದೇ ಆದ ಸ್ಮಾರ್ಟ್ ಫೋನ್ ಅಥವಾ ಟ್ಯಾಬ್ಲೆಟ್ ಬಳಸಿ ಪರೀಕ್ಷೆಯನ್ನು ಬರೆಯಬಹುದಾಗಿದೆ. ಪರೀಕ್ಷೆಯಲ್ಲಿ ಒಳಗಂಡಿರುವ ವಿಷಯಗಳು ಈ ಕೆಳಕಂಡಂತಿದೆ.

  • ಬ್ಯಾಂಕಿಂಗ್ ವಿಷಯ: 50 ಅಂಕಗಳು
  • ಸಾಮಾನ್ಯ ಜ್ಞಾನ: 25 ಅಂಕಗಳು
  • ತಂತ್ರಜ್ಞಾನ: 20 ಅಂಕಗಳು
  • ಮಾನಸಿಕ ಸಾಮರ್ಥ್ಯ: 15 ಅಂಕಗಳು
  • ಸಹಕಾರ ಕ್ಷೇತ್ರ: 10 ಪ್ರಶ್ನೆಗಳು
  • ಅಕೌಂಟ್ಸ್: 10 ಪ್ರಶ್ನೆಗಳು
  • ಇಂಗ್ಲಿಷ್ ಜ್ಞಾನ: 10 ಪ್ರಶ್ನೆಗಳು
  • ಕನ್ನಡ ಭಾಷಾ ಪ್ರಾವೀಣ್ಯತೆ: 10 ಪ್ರಶ್ನೆಗಳು
  • ಮೌಖಿಕ ಸಂದರ್ಶನ:

ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 27 ಏಪ್ರಿಲ್ 2026 ರಂದು ಹೊಸಪೇಟೆಯಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಸೂಚನೆ ಪ್ರಕಟವಾದ ದಿನಾಂಕ 09-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-04-2026
ಆನ್ಲೈನ್ ಪರೀಕ್ಷೆ ನಡೆಯುವ ದಿನಾಂಕ 26-04-2026
ಮೌಖಿಕ ಸಂದರ್ಶನ ನಡೆಯುವ ದಿನಾಂಕ 27-04-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕೆನ್ನುವ ಆಸಕ್ತಿಯನ್ನು ಹಿಂದಿದ್ದರೆ, ಈ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡವನ್ನು ಪೂರೈಸುತ್ತೀರೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಗೂಗಲ್ ಫಾರ್ಮ್ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment